ಉನೈಸ್ ಪೆರಾಜೆಯವರು ಕಳೆದ ಮೂರು ವರ್ಷಗಳಿಂದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಲ್ಲಿ ತೊಡಗಿಸಿಕೊಂಡು ಸುಮಾರು 50ಕ್ಕೂ ಮಿಕ್ಕಿ ವಿವಿಧ ಕನ್ನಡ ಶಾಲೆಗಳಿಗೆ ಕೊಡುಗೆಗಳನ್ನು ನೀಡಿದ್ದಾರೆ

ಬೆಂಗಳೂರು : ಕನ್ನಡಪರ ಧ್ವನಿ, ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ ಜನಕ,ಕನ್ನಡ ಪ್ರೇಮಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕೊಡಗು ಜಿಲ್ಲಾ ಅಧ್ಯಕ್ಷರಾದ ಉನೈಸ್ ಪೆರಾಜೆ ಯವರು ಇಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ. ಕನ್ನಡ ಶಾಲೆ ಉಳಿಸಿ ಬೆಳೆಸಿ ಕಾರ್ಯದಲ್ಲಿ ತೊಡಗಿರುವ ನಿಟ್ಟಿನಲ್ಲಿ. ಕನ್ನಡ ಫಿಲಂ ಚೇಂಬರ್ ವತಿಯಿಂದ ಪುನೀತ್ ರಾಜ್ ಕುಮಾರ್ 50 ನೇ ಹುಟ್ಟು ಹಬ್ಬದ ಪ್ರಯುಕ್ತ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಸ್ವೀಕರಿಸಿದರು




m

