ಕಾವು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ನಡೆದಿದೆ. ಕೇರಳ ನೊಂದಣಿ ಹೊಂದಿರುವ ಬೈಕ್ ಇದಾಗಿದ್ದು, ಮೃತ ಸವಾರನು ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಮೊಯಿದಿನ್ ಕುಂಞಿ ಎಂಬವರ ಮಗ ಅಶ್ರಫ್ ಎಂಬುವವರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.







m
