Featured, ಸ್ಥಳೀಯ

ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವವರ ವಿರುದ್ದ ದ.ಕ ಪೊಲೀಸರ ವಿಶೇಷ ಕಾರ್ಯಾಚರಣೆ : 36 ಮಂದಿಗೆ ಜಿಲ್ಲೆಯಿಂದ ಗಡಿಪಾರು !?

ದ ಕ ಪೊಲೀಸರು ಸಮಾಜದ ಶಾಂತಿ ಮತ್ತು ಶಿಸ್ತನ್ನು ಕಾಪಾಡುವ ಉದ್ದೇಶದಿಂದ ಈ ರೀತಿಯ ಕಠಿಣ ಕ್ರಮ ಕೈಗೊಂಡಿದ್ದು, ಭವಿಷ್ಯದಲ್ಲಿ ಯಾವುದೇ ದ್ವೇಷಮೂಲಕ ಕ್ರಿಯೆ ಅಥವಾ ಗಲಭೆಗೆ ಆಸ್ಪದ ಒದಗದಂತೆ ನೋಡಿಕೊಳ್ಳಲಾಗುತ್ತಿದೆ.

 

ಮಂಗಳೂರು, ಜೂನ್ 02 – ಸಮಾಜದಲ್ಲಿ ಅಶಾಂತಿ ಮೂಡಿಸಲು ಯತ್ನಿಸುವ ಮತ್ತು ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ವಿಶೇಷ ಕ್ರಮ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳ ಅಪರಾಧ ದ್ಧರ ಪಟ್ಟಿ ಸಿದ್ಧಪಡಿಸಿ, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ.

36 ಮಂದಿಗೆ ನೋಟಿಸ್ – ಕಾನೂನು ಪ್ರಕ್ರಿಯೆ ಆರಂಭಿಸಲಾಗಿದ್ದು ಪೋಲೀಸ್ ಇಲಾಖೆಯ ಪ್ರಕಟಣೆಯ ಪ್ರಕಾರ, ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಲತೀಷ್ ಗುಂಡ್ಯ, ಮನೋಹರ, ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಸಾದ್, ಶಮೀರ್, ಕಡಬ ಠಾಣಾ ವ್ಯಾಪ್ತಿಗೆ ಸೇರಿದ ಮಹಮ್ಮದ್ ನವಾಝ್ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳಿಗೆ ಸೇರಿದ ಒಟ್ಟು 36 ಮಂದಿ indivíduals ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾ ಮಟ್ಟದಲ್ಲಿ ಪ್ರಕ್ರಿಯೆ ಆರಂಭವಾಗಿದೆ

m

Related Posts