Featured, ಸ್ಥಳೀಯ

ದೇಶದ ಐದು ರಾಜ್ಯಗಳಲ್ಲಿ ಭೂಕಂಪ..! ರಿಕ್ಟರ್ ಮಾಪಕದಲ್ಲಿ 5.2 ತೀವ್ರತೆ : ಜನರಲ್ಲಿ ಆತಂಕ

ದೇಶದ ಈಶಾನ್ಯ ಭಾಗದ ಐದು ರಾಜ್ಯಗಳಲ್ಲಿ ಇಂದು ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ಜನರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಣಿಪುರ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ ಹಾಗೂ ಅರುಣಾಚಲ ಪ್ರದೇಶಗಳಲ್ಲಿ ಭೂಕಂಪದ ಕಂಪನಗಳು ಅನುಭವಕ್ಕೆ ಬಂದಿದ್ದು, ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 5.2 ಎಂದು ದಾಖಲಾಗಿದೆ. ಬೆಳಿಗ್ಗೆ 5:59ರ ಸುಮಾರಿಗೆ ಸಂಭವಿಸಿದ ಈ ಭೂಕಂಪದ ಕೇಂದ್ರಬಿಂದು ಮಣಿಪುರದ ಕಾಲ್ಟಾಂಗ್ ಪ್ರದೇಶವಾಗಿದ್ದು, ಭೂಮಿಯ ಮೇಲ್ಮೈಯಿಂದ ಸುಮಾರು 62 ಕಿಲೋಮೀಟರ್ ಆಳದಲ್ಲಿದೆ ಎಂದು ತಿಳಿದುಬಂದಿದೆ.
ಭೂಕಂಪದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿ ನಷ್ಟ ಸಂಭವಿಸಿಲ್ಲ. ಆದಾಗ್ಯೂ, ಅಚಾನಕ್ ಸಂಭವಿಸಿದ ಕಂಪನದಿಂದ ಭಯಭೀತರಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿದ ಘಟನೆಗಳು ವರದಿಯಾಗಿವೆ.
ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡಿದ್ದು, ಜನರು ಶಾಂತವಾಗಿರಲು ಹಾಗೂ ಅನಗತ್ಯ ಆತಂಕಕ್ಕೆ ಒಳಗಾಗದಂತೆ ಸೂಚಿಸಿದೆ.
m

Related Posts